Chaitanya Consultancy

Saturday, July 6, 2013

ಕನ್ನಡ ಸಾಹಿತ್ಯ ಪರಿಷತ್ತು ಪರೀಕ್ಷೆಗೆ ಅರ್ಜಿ ಆಹ್ವಾನ

  ಕನ್ನಡ ಸಾಹಿತ್ಯ ಪರಿಷತ್ತು ೨೦೧೩-೧೪ ನೇ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸಂಯೋಜಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
      ಕಸಾಪ ದಿಂದ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ನಮೂನೆ ಮತ್ತು ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳಿಗಾಗಿ ನೇರವಾಗಿ ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-೫೬೦೦೧೮ ಇವರನ್ನು ಸಂಪರ್ಕಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದೆ. ರೂ.೩೦ ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ ೧೫ ರವರೆಗೆ ಅರ್ಜಿ ಸಲ್ಲಿಸಬಹುದು. ಪರೀಕ್ಷಾರ್ಥಿಗಳು ಸಾಹಿತ್ಯ ಪರೀಕ್ಷೆಗಳ ಅರ್ಜಿಗಾಗಿ ರೂ.೧೫/- ನ್ನು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-೫೬೦೦೧೮ ಇವರಿಗೆ ಮನಿಯಾರ್ಡರ್ ಮೂಲಕ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೦-೨೬೬೨೩೫೮೪ ಗೆ ಸಂಪರ್ಕಿಸಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು  ತಿಳಿಸಿದ್ದಾರೆ.

0 comments:

Post a Comment